ಬಸವಣ್ಣ   
  ವಚನ - 1295     
 
ಭವರೋಗವೈದ್ಯನೆಂದು ನಂಬಿದೆ ನಾನು, ಒಮ್ಮಿಂಗೆ ಕರುಣಿಸಯ್ಯಾ ಭಕ್ತಿಫಲಪ್ರದಾಯಕ. ನೀನು ಒಮ್ಮಿಂಗೆ ಕರುಣಿಸಯ್ಯಾ ಜಯ ಜಯ ಶ್ರೀ ಮಹಾದೇವ ಎನುತಿರ್ದೆನು. ಕೂಡಲಸಂಗಮದೇವಯ್ಯಾ, ನಿಮ್ಮ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.