ಬಸವಣ್ಣ   
  ವಚನ - 1302     
 
ಮನದೊಡೆಯ ಮನೆಗೆ ಬಂದಡೆ ಕನಕದ ತೋರಣವ ಕಟ್ಟಿ, ಷಡುಸಮ್ಮಾರ್ಜನೆಯ ಮಾಡಿ, ರಂಗವಾಲಿಯನಿಕ್ಕಿ, ಉಘೇ, ಚಾಂಗು, ಭಲಾ ಎಂಬೆನು. ಕೂಡಲಸಂಗಮದೇವಾ, ನಿಮ್ಮ ಶರಣ ಪ್ರಭುದೇವರು ಬಂದಡೆ ಉಬ್ಬಿ ಕೊಬ್ಬಿ ನಲಿನಲಿದಾಡುವೆ.