ಬಸವಣ್ಣ   
  ವಚನ - 1304     
 
ಮನವು ಮಹದೊಳಗೆ ಲೀಯವಾಗಿ ಘಟವಿಡಿದು ಸುಳಿದಾಡುವ ಮಹಾಮಹಿಮಂಗೆ ಅಹುದಾಗದೆಂಬ ಭ್ರಾಂತೇಕೊ? ಹಿಡಿತಹುದು, ಬಾರದಡೆ ಶಿರವನರಿದು ತಹುದು. ಕೂಡಲಸಂಗಮದೇವರು ಬಲ್ಲಂತೆ ಮಾಡಲಿ.