ಬಸವಣ್ಣ   
  ವಚನ - 1306     
 
ಮನ್ನಣೆ ತಪ್ಪಿದ ಬಳಿಕ ಅಲ್ಲಿರಬಹುದೆ? ಸಲಿಗೆ ತಪ್ಪಿದ ಬಳಿಕ ಸಲುವುದೆ ಮಾತು? ತಿವಿದು ತಪ್ಪಿದಡೆ ಸಾವೊಂದು ತಪ್ಪದು. ಬರಿದೆ ಚಿಂತಿಸಿ ಬಳಲಿ ಕೆಡಬೇಡ ಮನವೆ. ಅಹುದು ಆಗದೆಂಬ ಸಂದೇಹವುಳ್ಳಡೆ ಅಹುದೆ? ಕೂಡಲಸಂಗಯ್ಯ ಕೊಟ್ಟಲ್ಲದಿಲ್ಲ.