ಬಸವಣ್ಣ   
  ವಚನ - 1317     
 
ಮಾರಂಕನಿರಿವಲ್ಲಿ ಘಾಯಖಂಡೆಯ ತೋರಿದಾತನೆ ತೆತ್ತಿಗ, ಕೈಯ ಕೈದು ಬಿದ್ದಲ್ಲಿ ಎತ್ತಿಕೊಟ್ಟಾತನೆ ಹಿತವ. ಕೂಡಲಸಂಗನ ಶರಣ ಸೊಡ್ಡಳ ಬಾಚರಸರ ಕರುಣವುಳ್ಳನ್ನಕ್ಕರ ಇನ್ನು ನಾನು ಅಂಜುವನಲ್ಲ ಕಾಣಾ, ಚೆನ್ನಬಸವಣ್ಣಾ.