ಬಸವಣ್ಣ   
  ವಚನ - 1321     
 
ಮೆಲ್ಲಮೆಲ್ಲನೆ ಭಕ್ತನೆನಿಸಿಕೊಂಬೆ, ಮೆಲ್ಲಮೆಲ್ಲನೆ ಮಾಹೇಶ್ವರನೆನಿಸಿಕೊಂಬೆ, ಮೆಲ್ಲಮೆಲ್ಲನೆ ಪ್ರಸಾದಿ ಎನಿಸಿಕೊಂಬೆ, ಮೆಲ್ಲಮೆಲ್ಲನೆ ಪ್ರಾಣಲಿಂಗಿ ಎನಿಸಿಕೊಂಬೆ, ಮೆಲ್ಲಮೆಲ್ಲನೆ ಶರಣನೆನಿಸಿಕೊಂಬೆ, ಮೆಲ್ಲಮೆಲ್ಲನೆ ಐಕ್ಯನೆನಿಸಿಕೊಂಬೆ. ಮೆಲ್ಲಮೆಲ್ಲನೆ ಷಟ್‍ಸ್ಥಲವ ಮೀರಿ ನಿರವಯಸ್ಥಲವನೆಯ್ದುವೆನಯ್ಯಾ, ಕೂಡಲಸಂಗಮದೇವಾ.