ಬಸವಣ್ಣ   
  ವಚನ - 1330     
 
ಲಿಂಗಗಂಭೀರ ಗಮನಗೆಟ್ಟುದಲ್ಲಾ, ಜಂಗಮಗಂಭೀರ ಸುಳುಹುಗೆಟ್ಟುದಲ್ಲಾ, ಪ್ರಸಾದಗಂಭೀರ ರೂಪುಗೆಟ್ಟುದಲ್ಲಾ, ಆಚಾರಗಂಭೀರ ಅವಯವಗೆಟ್ಟುದಲ್ಲಾ, ಜ್ಞಾನಗಂಭೀರ ನಡೆಗೆಟ್ಟುದಲ್ಲಾ, ಕೂಡಲಸಂಗಮದೇವರಲ್ಲಿ ಪ್ರಭುದೇವರು ನಿಜವನೈದಲು ಸಂಗನಬಸವಣ್ಣನ ಪ್ರಾಣ ಒಡನೆ ಬಳಿಸಂದಿತ್ತಲ್ಲಾ.