ಬಸವಣ್ಣ   
  ವಚನ - 1337     
 
ಲಿಂಗದಲ್ಲಿ ಹೊಳೆದು ಹೋಹ ಜಂಗಮವ ಕಂಡು ಬಿಟ್ಟಡೆ ಭವ ಹೊದ್ದಿತ್ತಯ್ಯಾ ಎನ್ನ ಭಕ್ತಿಗೆ. ಹಿಂದೆ ಲಿಂಗವನಗಲಿದ ಕಾರಣ ಬಂದೆನೀ ಜನ್ಮಕ್ಕೆ, ಕೂಡಲಸಂಗಯ್ಯ ತಪ್ಪಿಹೋಗದ ಮುನ್ನ ಹಿಡಿದು ತನ್ನಿ.