ಬಸವಣ್ಣ   
  ವಚನ - 1360     
 
ಶಿವನೆ ಜಗತ್ರಯಕ್ಕೊಡೆಯನೆಂದುದು ವೇದ, ಉತ್ಪತ್ತಿ ಸ್ಥಿತಿ ಲಯಕಾರಣನೆಂದುದು ವೇದ, `ಈಶಃ ಸರ್ವಸ್ಯ ಜಗತಃ ಪ್ರಭುಃ ಪ್ರೀಣಾತಿ ವಿಶ್ವಭುಕ್' ಎಂದುದು ಶ್ರುತಿ. ಇದು ಕಾರಣ, ಕೂಡಲಸಂಗಮದೇವನೊಬ್ಬನೆ ದೇವನು.