ಬಸವಣ್ಣ   
  ವಚನ - 1361     
 
ಶಿವಶಿವಾಯೆಂಬ ಮಂತ್ರವೆನಗೆ ಅಮೃತಾರೋಗಣೆಯೋ ಎನ್ನ ತಂದೆ. ಹರ ಹರಾ ಎಂಬ ಮಂತ್ರವೆನಗೆ ಅಮೃತಾರೋಗಣೆಯೋ ಎನ್ನ ತಂದೆ. ಶ್ರೀ ವಿಭೂತಿ ರುದ್ರಾಕ್ಷಿ ಭಕುತಿಯ ಮುಕುತಿಗೆ ಸಾಧನವೋ ಎನ್ನ ತಂದೆ, ಎನಗಿದೆ ಗತಿಮತಿ ಚೈತನ್ಯ, ಕೂಡಲಸಂಗಮದೇವಯ್ಯಾ, ನಿಮ್ಮ ನಾಮದ ರುಚಿ ತುಂಬಿತ್ತೊ ಎನ್ನ ತನುವ.