ಬಸವಣ್ಣ   
  ವಚನ - 1368     
 
ಸಂಜೆಯ ಮಂಜಿನ ಕಪ್ಪು ಅಂಜಿದಡೆ ಶಂಕೆ ತದ್ರೂಪವಾಗಿ ನಿಂದಿತ್ತು. ತನ್ನ ಭಾವದ ನಟನೆ ನಡೆವನ್ನಕ್ಕ ನಡೆಯಿತ್ತು, ಅದು ನಿಂದಲ್ಲಿಯೇ ನಿಂದಿತ್ತು. ಅದರಂತುವನರಿದಡೆ ಹಿಂದೆ ಹುಸಿ, ಮುಂದೆ ಕೂಡಲಸಂಗಮದೇವನ ನಿಲವು ತಾನೆ !