ಬಸವಣ್ಣ   
  ವಚನ - 1371     
 
ಸಕಲಕ್ರಿಯೆಗಳಿಗಿದು ಕವಚ, ಸಕಲವಶ್ಯಕ್ಕಿದು ಶುಭತಿಲಕ, ಸಕಲಸಂಪದಕ್ಕೆ ತಾಣವಿದು, ಅಘಟಿತ ಘಟಿತವೆನಿಸುವ ಅನುಪಮ ತ್ರಿಪುಂಡ್ರ. ಅಣುಮಾತ್ರ ವಿಭೂತಿಯ ಪಣೆಯೊಳಿಡೆ ಎಣಿಕೆಯಿಲ್ಲದ ಭವಪಾಶ ಪರಿವುದು. ತ್ರಿಣಯ ನೀನೊಲಿದು ಧರಿಸಿದೆಯೆಂದೆನೆ, ಆನು ಧರಿಸಿ ಬದುಕಿದೆ ಕೂಡಲಸಂಗಯ್ಯಾ.