ಬಸವಣ್ಣ   
  ವಚನ - 1381     
 
ಸಮುದ್ರಕ್ಕೆ ಚಂದ್ರಮನ ಬರವೆ ಜೀವಾಳವಯ್ಯಾ, ಬತ್ತಿದ ಕೆರೆಯ ಕಮಲಕ್ಕೆ ಉದಕವೆ ಜೀವಾಳವಯ್ಯಾ, ಚಕೋರಂಗೆ ಚಂದ್ರಮನ ಬರವೆ ಜೀವಾಳವಯ್ಯಾ. ಕೂಡಲಸಂಗಮದೇವಾ, ಎನಗೆ ನಿಮ್ಮ ಶರಣರ ಬರವೆ ಜೀವಾಳವಯ್ಯಾ.