ಬಸವಣ್ಣ   
  ವಚನ - 1382     
 
ಸಯದಾನ ಸವೆಯಿತ್ತೆಂದು ಬೆದರಿದೆನಾದಡೆ ನಿಮ್ಮಾಣೆ, ನಿಮ್ಮ ಪ್ರಮಥರಾಣೆ. ಪಡಿಪದಾರ್ಥಂಗಳು ಅವಸರಕ್ಕೆ ಒದಗದೆ ಇದ್ದಲ್ಲಿ ಮನವಳುಕಿ ಬೆದರಿದೆನಾದಡೆ ನಿಮ್ಮ ಭಕ್ತರಿಗೆ ಸಲ್ಲೆನು, ಒಡವೆ ಸವೆದಡೆ ಒಡಲನೆ ಸಲಿಸುವೆನು. ಕಡೆಮುಟ್ಟ ಪೂರೈಸದಿದ್ದೆನಾದಡೆ ಮಡಿವಾಳ ಮಾಚಿತಂದೆಯ ಪಾದಸಾಕ್ಷಿಯಾಗಿ ಕೂಡಲಸಂಗಮದೇವರಿಗೆ ದೂರವಹೆನು.