ಬಸವಣ್ಣ   
  ವಚನ - 1385     
 
ಸಾಕಾರ ಸಂಗನಲ್ಲಿ ನಿರಾಕಾರವಿಲ್ಲೆಂದು ನಿರಾಕರ ಸಂಗ(ನ)ವನರಸಿ ತೊಳಲಿ ಬಳಲಿದೆನಯ್ಯಾ. ನಿಶ್ಚಿಂತ ನಿಜಭಜನೆ ನೆಲೆಗೊಳ್ಳದೆನಗೆ, ಭ್ರಾಂತು ಭ್ರಮೆಯಿಲ್ಲದಂತೆ ಎಂದಪ್ಪುದೋ ಎನಗೆ ಕೂಡಲಸಂಗಮದೇವಾ, ಕೇಳಯ್ಯಾ.