ಬಸವಣ್ಣ   
  ವಚನ - 1405     
 
ಹಿಂದೆ ಸಂದ ಭಕ್ತರಂತಾನೊಂದೊಂದ ಬೇಡಿ ಕಾಡುವನಲ್ಲ, ಹಿಂದೆ ಬೆನ್ನಲಿ ಬಂದು ಬಳಲಿದೆ. ಇನ್ನೊಂದ ಬೇಡೆನಂಜದಿರಂಜದಿರಯ್ಯಾ, ಆಶಾಪಾಶ ಎನ್ನಲ್ಲುಳ್ಳಡೆ ಕೂಡಲಸಂಗಾ ನಿಮ್ಮಾಣೆ.