ವಚನ - 15     
 
ಅಗ್ನಿ ಸರ್ವವ್ಯಾಪಕನಾಗಿರುವಂತೆ, ಚಿದ್ವಹ್ನಿರೂಪನಾದ ಶಿವನು ಸರ್ವವ್ಯಾಪಕನಾಗಿರ್ಪನು. ಹೃದಯಕಮಲವು ಮುಕುರದೋಪಾದಿಯಲ್ಲಿ ಪ್ರಕಾಶಿಸುತಿರ್ದಪುದು. ಆ ಕನ್ನಡಿಯೋಪಾದಿಯ ಹೃದಯಕಮಲದಲ್ಲಿ ವ್ಯಾಪಕನಾದ ಶಿವನು, ಆತ್ಮನೆನಿಸಿಕೊಂಡು ಪ್ರತಿಬಿಂಬಿಸುತಿರ್ದಪನು. ವೇದೋಪನಿಷದ್ಗಾಯತ್ರಿ ಪ್ರಸಿದ್ದವಾದೀ ರಹಸ್ಯವ ಗುರೂಪದೇಶದಿಂ ತಿಳಿವುದಯ್ಯ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.