ವಚನ - 20     
 
ಅನುತಾಪದೊಡಲಿಂದೆ ಬಂದ ನೋವನುಂಬವರು ಒಡಲೊ, ಪ್ರಾಣವೊ, ಆರು ಹೇಳಾ? ಎನ್ನೊಡಲಿಂಗೆ ನೀನು ಪ್ರಾಣವಾದ ಬಳಿಕ ಎನ್ನ ಒಡಲ ಸುಖ ದುಃಖವಾರ ತಾಗುವುದು ಹೇಳಯ್ಯಾ? ಚೆನ್ನಮಲ್ಲಿಕಾರ್ಜುನಯ್ಯಾ, ಎನ್ನ ನೊಂದ ನೋವು, ಬೆಂದ ಬೇಗೆ, ನಿಮ್ಮ ತಾಗದೆ ಹೋಹುದೆ ಅಯ್ಯಾ?