ವಚನ - 48     
 
ಅಷ್ಟದಳಕಮಲದ ಆತ್ಮನೊಳಗೆ ಸೃಷ್ಟಿ ಜನಿಸಿ, ಕೂರುಮ ದಿಗುದಂತಿ ದಿಗುವಳಯವ ನುಂಗಿ, ನಿಜಶೂನ್ಯ ತಾನಾದ ಬಳಿಕ, ತನ್ನ ತಾನರಿದ ನಿಜಪದ ಭಿನ್ನಯೋಗಕ್ಕೆ ಬಹುದೆ? ಕಂಗಳ ನೋಟದಲ್ಲಿ ಮನದ ಸೊಗಸಿನಲ್ಲಿ, ಅನಂಗನ ದಾಳಿಯನಗಲಿದೆನಣ್ಣಾ. ಮರೀಚಿಕಾಜಲದೊಳಡಗಿದ ಪ್ರಾಣಿ ವ್ಯಾಧನ ಬಲೆಯೊಳಗಹುದೆ? ಎನ್ನ ದೇವ ಚೆನ್ನಮಲ್ಲಿಕಾರ್ಜುನನಲ್ಲದೆ ಪರಪುರುಷರು ನಮಗಾಗದಣ್ಣಾ.