ವಚನ - 58     
 
ಆದಿ ಅನಾದಿಯೆನ್ನದೆ ಬಸವಣ್ಣ ಗಣಮೇಳಾಪವಾಗಿ ಅನಂತ ಯುಗಂಗಳಲ್ಲಿಯೂ ಸಕಲ ಲೋಕದೊಳು ಚರಿಸುತ್ತಿಪ್ಪ ಸುಳುಹನರಿಯದೆ ಸಕಲ ನಿಃಕಲರೆಲ್ಲ ಭ್ರಮೆಗೊಂಡು ಬೀಳುತ್ತೇಳುತ್ತಿರ್ದರು. ಇವರೆಲ್ಲರ ಮುಂದೆ ಆ ಗಣಂಗಳ ನಾನರಿದು ಬದುಕಿದೆನು ಕಾಣಾ ಶ್ರೀಶೈಲ ಚೆನ್ನಮಲ್ಲಿಕಾರ್ಜುನಾ.