ವಚನ - 59     
 
ಆಧಾರ ಸ್ವಾಧಿಷ್ಠಾನ ಮಣಿಪೂರಕ ವಿಶುದ್ಧಿ ಆಜ್ಞೇಯವ ನುಡಿದಡೇನು? ಆದಿ ಅನಾದಿಯ ಸುದ್ದಿಯ ಕೇಳಿದಡೇನು ಹೇಳಿದಡೇನು? ತನ್ನಲ್ಲಿದ್ದುದ ತಾನರಿಯದನ್ನಕ್ಕರ. ಉನ್ಮನಿಯ ರಭಸದ ಮನ ಪವನದ ಮೇಲೆ ಚೆನ್ನಮಲ್ಲಿಕಾರ್ಜುನಯ್ಯನ ಭೇದಿಸಲರಿಯರು.