ವಚನ - 62     
 
ಆಯುಷ್ಯ ಹೋಗುತ್ತಿದೆ, ಭವಿಷ್ಯ ತೊಲಗುತ್ತಿದೆ, ಕೂಡಿರ್ದ ಸತಿಸುತರು ತಮತಮಗೆ ಹರಿದು ಹೋಗುತ್ತೈದಾರೆ; ಬೇಡ ಬೇಡವೆಲೆ ಬಂಜೆಯಾಗಿ ಕೆಡಬೇಡ ಬಯಲಿಂಗೆ ಮನವೆ, ಚೆನ್ನಮಲ್ಲಿಕಾರ್ಜುನನ ಶರಣರ ಸಂಗದಲ್ಲಿ, ಹೂಣಿ ಹೊಕ್ಕು ಬದುಕು ಕಂಡಾ, ಮನವೆ.