ವಚನ - 72     
 
ಇಂದ್ರಿಯವ ಬಿಟ್ಟು ಕಾಯವಿರದು; ಕಾಯವ ಬಿಟ್ಟು ಇಂದ್ರಿಯವಿರದು. ಎಂತು ನಿಃಕಾಮಿಯೆಂಬೆ, ಎಂತು ನಿರ್ದೋಷಿಯೆಂಬೆ ನೀನೊಲಿದಡೆ ಸುಖಿಯಾಗಿಪ್ಪೆ, ನೀನೊಲ್ಲದಿರೆ ದುಃಖಿಯಾಗಿಪ್ಪೆನಯ್ಯಾ, ಚೆನ್ನಮಲ್ಲಿಕಾರ್ಜುನಾ.