ವಚನ - 112     
 
ಎಲ್ಲ ಎಲ್ಲವನರಿದು ಫಲವೇನಯ್ಯಾ, ತನ್ನ ತಾನರಿಯಬೇಕಲ್ಲದೆ? ತನ್ನಲ್ಲಿ ಅರಿವು ಸ್ವಯವಾಗಿರಲು ಅನ್ಯರ ಕೇಳಲುಂಟೆ? ಚೆನ್ನಮಲ್ಲಿಕಾರ್ಜುನಾ, ನೀನರಿವಾಗಿ ಎನೆಗೆ ಮುಂದುದೋರಿದ ಕಾರಣ ನಿಮ್ಮಿಂದ ನಿಮ್ಮನರಿದೆನಯ್ಯಾ ಪ್ರಭುವೆ.