ವಚನ - 148     
 
ಕಲ್ಲ ಹೊತ್ತು ಕಡಲೊಳಗೆ ಮುಳುಗಿದಡೆ ಎಡರಿಂಗೆ ಕಡೆಯುಂಟೆ ಅವ್ವಾ? ಉಂಡು ಹಸಿವಾಯಿತ್ತೆಂದಡೆ ಭಂಗವೆಂಬೆ. ಕಂಡ ಕಂಡ ಠಾವಿನಲ್ಲಿ ಮನ ಬೆಂದಡೆ ಗಂಡ ಚೆನ್ನಮಲ್ಲಿಕಾರ್ಜುನಯ್ಯನೆಂತೊಲಿವನವ್ವಾ?