ವಚನ - 170     
 
ಕುಲಗಿರಿಯ ಶಿಖರದ ಮೇಲೆ ಬಾಳೆ ಬೆಳೆವುದಯ್ಯಾ ಎಂದಡೆ, ಬಾಳೆ ಬೆಳೆವುದಯ್ಯಾ ಎನಬೇಕು. ಓರೆಗಲ್ಲ ನುಗ್ಗುಗುಟ್ಟಿ ಮೆಲಬಹುದಯ್ಯಾ ಎಂದಡೆ, ಅದು ಅತ್ಯಂತ ಮೃದು ಮೆಲಬಹುದಯ್ಯ ಎನಬೇಕು. ಸಿಕ್ಕದ ಠಾವಿನಲ್ಲಿ ಉಚಿತವ ನುಡಿವುದೆ ಕಾರಣ ಚೆನ್ನಮಲ್ಲಿಕಾರ್ಜುನ[ಯ್ಯಾ] ಮರ್ತ್ಯಕ್ಕೆ ಬಂದುದಕ್ಕಿದೆ ಗೆಲವು.