ವಚನ - 239     
 
ಧರೆಯ ಮೇಗಣ ಹುಲ್ಲೆ, ಚಂದ್ರಮನೊಳಗಣ ಎರಳೆ, ಕೂರ್ತಡೆ ಫಲವೇನೋ ಕೂಟವಿಲ್ಲದನ್ನಕ್ಕ? ಇಂಬನರಿಯದ ಠಾವಿನಲ್ಲಿ ಕಣ್ಣೋಟವ ಮಾಡಿದಡೆ, ತುಂಬಿದ ತೊರೆಯ ನಡುವೆ ಮಾಮರ ಕಾತಂತೆ. ಚೆನ್ನಮಲ್ಲಿಕಾರ್ಜುನದೇವಾ, ದೂರದ ಸ್ನೇಹವಮಾಡಲು ಬಾರದ ಭವಕ್ಕೆ ಬಂದೆ.