ವಚನ - 263     
 
ನೆಲದ ಮರೆಯ ನಿಧಾನದಂತೆ, ಫಲದ ಮರೆಯ ರುಚಿಯಂತೆ, ಶಿಲೆಯ ಮರೆಯ ಹೇಮದಂತೆ, ತಿಲದ ಮರೆಯ ತೈಲದಂತೆ, ಮರದ ಮರೆಯ ತೇಜದಂತೆ, ಭಾವದ ಮರೆಯ ಬ್ರಹ್ಮವಾಗಿಪ್ಪ ಚೆನ್ನಮಲ್ಲಿಕಾರ್ಜುನನ ನಿಲವನರಿಯಬಾರದು.