ವಚನ - 282     
 
ಪೃಥ್ವಿಯ ಗೆಲಿದ ಏಲೇಶ್ವರನ ಕಂಡೆ. ಭಾವಭ್ರಮೆಯ ಗೆಲಿದ ಬ್ರಹ್ಮೇಶ್ವರನ ಕಂಡೆ. ಸತ್ವ ರಜ ತಮ ತ್ರಿವಿಧವ ಗೆಲಿದ ತ್ರಿಪುರಾಂತಕನ ಕಂಡೆ. ಅಂತರಂಗದ ಆತ್ಮಜ್ಞಾನದಿಂದ ಜ್ಯೋತಿಸಿದ್ಧಯ್ಯನ ಕಂಡೆ. ಇವರೆಲ್ಲರ ಮಧ್ಯಮಸ್ಥಾನ ಪ್ರಾಣಲಿಂಗ ಜಂಗಮವೆಂದು ಸುಜ್ಞಾನದಲ್ಲಿ ತೋರಿದ ಬಸವಣ್ಣ; ಆ ಬಸವಣ್ಣನ ಪ್ರಸಾದದಿಂದ ಚೆನ್ನಮಲ್ಲಿಕಾರ್ಜುನನ ಕಂಡೆನಯ್ಯಾ.