ವಚನ - 292     
 
ಬಸವಣ್ಣನ ಭಕ್ತಿ, ಚೆನ್ನಬಸವಣ್ಣನ ಜ್ಞಾನ, ಮಡಿವಾಳಯ್ಯನ ನಿಷ್ಠೆ, ಪ್ರಭುದೇವರ ಜಂಗಮಸ್ಥಲ, ಅಜಗಣ್ಣನ ಐಕ್ಯಸ್ಥಲ, ನಿಜಗುಣನ ಆರೂಢಸ್ಥಲ, ಸಿದ್ಧರಾಮಯ್ಯನ ಸಮಾಧಿಸ್ಥಲ, ಇಂತಿವರ ಕರುಣಪ್ರಸಾದ ಎನಗಾಯಿತ್ತು ಚೆನ್ನಮಲ್ಲಿಕಾರ್ಜುನಯ್ಯಾ.