ವಚನ - 318     
 
ಮಧ್ಯಾಹ್ನದಿಂದ ಮೇಲೆ ಹಿರಿಯರಿಲ್ಲ. ಅಸ್ತಮಾನದಿಂದ ಮೇಲೆ ಜಿತೇಂದ್ರಿಯರಿಲ್ಲ. ವಿಧಿಯ ಮೀರುವ ಅಮರರಿಲ್ಲ. ಕ್ಷುಧೆ ವಿಧಿ ವ್ಯಸನಕ್ಕಂಜಿ, ನಾ ನಿಮ್ಮ ಮರೆಹೊಕ್ಕು ಬದುಕಿದೆನು ಚೆನ್ನಮಲ್ಲಿಕಾರ್ಜುನಾ.