ವಚನ - 326     
 
ಮರೆಹು ಬಂದಿಹುದೆಂದು ಗುರು ಕುರುಹನೆ ಕೊಟ್ಟ; ಅರಿವಿಂಗೆ ಪ್ರಾಣಲಿಂಗ ಬೇರೆ ಕಾಣಿರಣ್ಣಾ. ನಿರ್ಣಯವಿಲ್ಲದ ಭಕ್ತಿಗೆ ಬರಿದೆ ಬಳಲಲದೇತಕೆ? ಚೆನ್ನಮಲ್ಲಿಕಾರ್ಜುನಯ್ಯನನರಿದು ಪೂಜಿಸಿದಡೆ ಮರಳಿ ಭವಕ್ಕೆ ಬಹನೆ?