ವಚನ - 368     
 
ವೇದ ಶಾಸ್ತ್ರ ಆಗಮ ಪುರಾಣಗಳೆಲ್ಲವು ಕೊಟ್ಟಣವ ಕುಟ್ಟಿದ ನುಚ್ಚು ತೌಡು ಕಾಣಿಭೋ. ಇವ ಕುಟ್ಟಲೇಕೆ ಕುಸುಕಲೇಕೆ? ಅತ್ತಲಿತ್ತ ಹರಿವ ಮನದ ಶಿರವನರಿದಡೆ ಬಚ್ಚಬರಿಯ ಬಯಲು ಚೆನ್ನಮಲ್ಲಿಕಾರ್ಜುನಾ.