ವಚನ - 369     
 
ಶರಣರ ಮನ ನೋಯ ನುಡಿದೆನಾಗಿ, ಹರಜನ್ಮವಳಿದು ನರಜನ್ಮಕ್ಕೆ ಬಂದೆನು. ಹರನಟ್ಟಿದ ಬೆಸನ ಶಿರದೊಳಗಾಂತೊಡೆ, ಗಿರಿಗಳ ಭಾರವೆನಗಾದುದಯ್ಯ. ಚೆನ್ನಮಲ್ಲಿಕಾರ್ಜುನನ ಧರ್ಮದಿಂದ ಸಂಸಾರ ಕರ್ಮದ ಹೊರೆಯನಿಳುಹಿ, ನಡುದೊರೆಯ ಹಾಯಿದು ಹೋದೆನು.