ವಚನ - 371     
 
ಶಿವಗಣಂಗಳ ಮನೆಯಂಗಳ ವಾರಣಾಸಿಯೆಂಬುದು ಹುಸಿಯೆ? ಪುರಾತನರ ಮನೆಯಂಗಳದಲ್ಲಿ ಅಷ್ಟಾಷಷ್ಟಿ ತೀರ್ಥಂಗಳು ನೆಲೆಸಿಪ್ಪವಾಗಿ. ಅದೆಂತೆಂದಡೆ- ಅದಕ್ಕೆ ಆಗಮ ಸಾಕ್ಷಿ: ಕೇದಾರಸ್ಯೋದಕೆ ಪೀತೇ ವಾರಣಾಸ್ಯಾ ಮೃತೇ ಸತೀ | ಶ್ರೀಶೈಲಶಿಖರೇ ದೃಷ್ಟೇ ಪುನರ್ಜನ್ಮ ನ ವಿದ್ಯತೇ ||'' ಎಂಬ ಶಬ್ದಕ್ಕಧಿಕವು. ಸುತ್ತಿಬರಲು ಶ್ರೀಶೈಲ, ಕೆಲಬಲದಲ್ಲಿ ಕೇದಾರ, ಅಲ್ಲಿಂದ ಹೊರಗೆ ವಾರಣಾಸಿ. ವಿರಕ್ತಿ ಬೆದೆಯಾಗಿ, ಭಕ್ತಿ ಮೊಳೆಯಾಗೆ, ಎನ್ನ ದೇವ ಚೆನ್ನಮಲ್ಲಿಕಾರ್ಜುನಾ ನಿಮ್ಮ ಭಕ್ತರ ಮನೆಯಂಗಳ ಪ್ರಯಾಗದಿಂದ ಗುರುಗಂಜಿಯಧಿಕ ನೋಡಾ.