ವಚನ - 410     
 
ಹಸಿವು ತೃಷೆಯಾದಿಗಳು ಎನ್ನೊಳಗಾದ ಬಳಿಕ, ವಿಷಯ ವಿಕಾರವೆನ್ನನಿರಿಸಿ ಹೋದವು ಕಾಣಾ ತಂದೆ. ಅದೇ ಕಾರಣ ನೀವು ಅರಸಿಕೊಂಡು ಬಂದಿರಣ್ಣ. ನೀವು ಅರಸುವ ಅರಕೆ - ಎನ್ನೊಳಗಾಯಿತ್ತು. ಎನ್ನ ದೇವ ಚೆನ್ನಮಲ್ಲಿಕಾರ್ಜುನ ತನ್ನೊಳಗೆನ್ನನಿಂಬಿಟ್ಟುಕೊಂಡನಾಗಿ ಇನ್ನು ನಿನ್ನ ತಂದೆ ತಾಯಿತನವನೊಲ್ಲೆ ನಾನು.