ವಚನ - 1005     
 
ಒಂದು ಧನುವಿಂಗೆ ಮೂರಂಬ ಹಿಡಿದೆ. ಒಂದು ಬಾಣವ ಬಿಡಲಾಗಿ ಪದ್ಮೋದ್ಭವನ ಸೃಷ್ಟಿಯ ಕಟ್ಟಿತ್ತು, ಮತ್ತೊಂದು ಬಾಣವ ಬಿಡಲಾಗಿ ಪದ್ಮೋದ್ಭವನ ಹೆಡಗಯ್ಯ ಕಟ್ಟಿತ್ತು. ಕಡೆಯ ಬಾಣವು ರುದ್ರನ ಹಣೆಯನೊಡೆದು ಅಲಗು ಮುರಿಯಿತ್ತು. ನಾರಿ ಜಾರಿತ್ತು, ನಾರಿಯ ಹೂಳುವ ಹಿಳಿಕು ಹೋಳಾಯಿತ್ತು. ಗುಹೇಶ್ವರನ ಶರಣ ಅಲ್ಲಮ ಹಿಡಿದ ಬಿಲ್ಲು ಮುರಿಯಿತ್ತು.