ವಚನ - 1022     
 
ಓಟೆ ಇದ್ದಂತೆ ಕಾಯಿ ಮೆದ್ದವರುಂಟೆ? ಕಾಯದ ಗುಣವಿದ್ದಂತೆ ಲಿಂಗವನರಿದವರುಂಟೆ? ಜೋಡು ಹರಿದಲ್ಲದೆ ಕಾಯವನಿರಿಯಲರಿಯದು ಕೈದು. ಆ ಭಾವವ ತಿಳಿದಲ್ಲದೆ ನಮ್ಮ ಗುಹೇಶ್ವರಲಿಂಗವನರಿಯಬಾರದು ಕಾಣಾ, ಎಲೆ ಅಂಬಿಗರ ಚೌಡಯ್ಯ.