ವಚನ - 1047     
 
ಕಬ್ಬು ಬೆಳೆವುದಯ್ಯ ಕರಿಯ ಭೂಮಿಯಿದ್ದಲ್ಲಿ, ಉಬ್ಬುಬ್ಬಿ ಬೆಳೆವುದಯ್ಯ ಜಲ ಪ್ರಮಾಣವಿರ್ದಲ್ಲಿ, ದಾರಿದ್ರ್ಯವಿದ್ದಲ್ಲಿ ನಿದ್ರೆ ಬೆಳೆವುದಯ್ಯ, ನಮ್ಮ ಶಿವನ ಸಲೆ ಸಂದ ಶರಣರಾದ ಹಿರಿಯರಿದ್ದಲ್ಲಿ ಬುದ್ಧಿ ಬೆಳವುದಯ್ಯ, ಜಟ್ಟಿ ಮಾಸಾಳರಿರ್ದಲ್ಲಿ ಕಾಳಗ ಘನವನಪ್ಪುದಯ್ಯ, ಇಷ್ಟ ಕಂಡು ಬೆರಗಾದ ನಮ್ಮ ಗುಹೇಶ್ವರ.