ವಚನ - 1056     
 
ಕರ್ಮವೆ ಪ್ರಾಣವೆಂದು ಮಾಡುವಾಗ ಜ್ಞಾನವನರಿವ ನೆಲೆ ಶುದ್ಧವಿನ್ನಾವುದು? ಸಾವನ್ನಕ್ಕ ಸಾಧನೆಯ ಮಾಡಿ ಕಾದುವಾ ಠಾವಿನ್ನಾವುದು? ಅರಿದುದ ನೇತಿಗಳೆದು; ಮೇಲರಿದುದ ಕರಿಗೊಳ್ಳುತ್ತ ತುಷವ ನೀಗಿದ ತಂಡುಲದಂತೆ ಕಾಯದ ದೆಸೆ ಶುದ್ಧವಾಗಿರಬೇಕು, ಸಿದ್ಧರಾಮಯ್ಯಾ ಗುಹೇಶ್ವರಲಿಂಗವನರಿವುದಕ್ಕೆ.