ವಚನ - 1076     
 
ಕಾಯಗುಣವಳಿದು ಜೀವನ್ಮುಕ್ತನಾದ ಬಳಿಕ ಸಮ್ಯಕ್‍ಜ್ಞಾನವೆಂಬ ಶಾಂತಿ ದೊರೆಕೊಂಡಿತ್ತು ನೋಡಿರೆ! ಅಂತರಂಗ ಬಹಿರಂಗವೆಂಬುದನು ಅರಿಯನಾಗಿ ದ್ವೈತಾದ್ವೈತವ ನೀಕರಿಸಿ, ನಿರ್ವಾಣ ನಿಷ್ಪತಿಯಾಗಿ, ಗುಹೇಶ್ವರಾ ನಿಮ್ಮ ಶರಣನನುಪಮ ಸುಖಿಯಾಗಿರ್ದನು.