ವಚನ - 1083     
 
ಕಾಯದ ಕೈಯಲ್ಲಿ ಲಿಂಗಕ್ಕೆ ಮಜ್ಜನ, ಪ್ರಾಣದ ಕೈಯಲ್ಲಿ ಜಂಗಮಕ್ಕೆ ಭೋಜನ, ಇವ ಮಾಡಲೆ ಬೇಕು. ಸುಳಿವ ಸುಳುಹುಳ್ಳನ್ನಕ್ಕ ಲಿಂಗಜಂಗಮಕ್ಕೆ ಮಾಡಲೆ ಬೇಕು. ಗುಹೇಶ್ವರನೆಂಬ ಆತ್ಮನುಳ್ಳನ್ನಕ್ಕ ಸತ್ಕ್ರೀಯ ಮಾಡಲೆ ಬೇಕು.