ವಚನ - 1093     
 
ಕಾಯವಿಡಿದು ಸುಳಿದಾಡುವನ್ನಕ್ಕ, ಕರಣಂಗಳ ಮೀರುವರಾರೈ ಚೆನ್ನಬಸವಣ್ಣಾ? ಕರಣಂಗಳಿಂದ ಕರ್ಮಂಗಳ ಮಾಡುತ್ತಿದ್ದಿತು. ಕರ್ಮವ ಕರ್ಮದಿಂದ ಅಳಿದು ಮಲವ ಜಲ ತೊಳೆದಂತೆ, ನಾನು ಕಾಯದ ಕರ್ಮ ಮಾಡುವಲ್ಲಿ, ಜೀವವಿಕಾರ ಬಿಡಿಸಿದೆಯಲ್ಲಾ! ಚೆನ್ನಬಸವಣ್ಣಾ! ಗುಹೇಶ್ವರಲಿಂಗಕ್ಕೆ ಒಡಲಿಲ್ಲ ಎಂಬುದನು, ಅರುಹಿದೆಯಲ್ಲಾ ಚೆನ್ನಬಸವಣ್ಣಾ.