ವಚನ - 1113     
 
ಕಿಚ್ಚು ಬಯಲೆಂದಡದು ನಿರವಯವಕೆ ಹತ್ತಿ ಹೊತ್ತಿದುದುಂಟೆ? ಅರಿವು ನಿಜವೆಂದಡೆ ಅಡಗುವುದಕ್ಕೊಂದು ನಾಮ ಉಂಟು. ಅಗ್ನಿರೂಪಿನಲ್ಲಿ ಹುಟ್ಟಿ ಆ ರೂಪ ದಗ್ಧವ ಮಾಡಿದಲ್ಲದೆ ತನ್ನ ಹೊದ್ದಿಗೆ ಕೆಡದು. ಆ ಉಭಯವನರಿವನ್ನಬರ ಕೈಯ ಕುರುಹು, ಅರಿವನ ಜ್ಞಾನ ಪರಿಪೂರ್ಣವಾಗಿರಬೇಕು. ನಮ್ಮ ಗುಹೇಶ್ವರಲಿಂಗದಲ್ಲಿ ಆ ಉಭಯವ ತಿಳಿವನ್ನಬರ ತನ್ನ ಹಿಂಗಿರಬೇಕು ಕಾಣಾ, ಎಲೆ ಅಂಬಿಗರ ಚೌಡಯ್ಯ.