ವಚನ - 112     
 
ಪೃಥ್ವಿಕುಲಮಂಟಪದ ಮೇಲೆ ಪಾದಶಿಲೆ ಬಿಗಿದು, ತಳಕಂಭ ಕಳಸದ ಮೇಲೆ ಕೆಸರುಗಲ್ಲು. ಒಂದು ಮಠಕ್ಕೆ ಒಂಬತ್ತು ತುಂಬಿಯ ಆಳಾಪ. ಬಗೆಯ ಬಣ್ಣದ ಮೇಲೆ ಹಿರಿದಪ್ಪ ಸಂಯೋಗ! ಅಂಗಜನ ಪಡೆ ಕೋಟಿ, ಮುಂಡವೆದ್ದು ಕುಣಿವಲ್ಲಿ, ರಣವುಂಡ ಭೂಮಿಯನು ಮೀರಿದನು ಗುಹೇಶ್ವರ!