ವಚನ - 1121     
 
ಕೃತಯುಗದಲ್ಲಿ ನಾನು ಭಕ್ತಿ ಕಾರಣ ಸ್ಥೂಲಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ. ತ್ರೇತಾಯುಗದಲ್ಲಿ ನಾನು ಭಕ್ತಿ ಕಾರಣ ಶೂನ್ಯಕಾಯನೆಂಬ ಗಣೇಶ್ವರನಾಗಿರ್ದೆನಯ್ಯಾ. ದ್ವಾಪರದಲ್ಲಿ ನಾನು ಭಕ್ತಿ ಕಾರಣ ಅನಿಮಿಷನೆಂಬ ಗಣೇಶ್ವರನಾಗಿರ್ದೆನಯ್ಯಾ. ಕಲಿಯುಗದಲ್ಲಿ ನಾನು ಭಕ್ತಿ ಕಾರಣ ಅಲ್ಲಮಪ್ರಭುವೆಂಬ ಜಂಗಮನಾಗಿರ್ದೆ ಕಾಣಾ ಗುಹೇಶ್ವರಾ.