ವಚನ - 1136     
 
ಕೋಪ-ತಾಪವ ಬಿಟ್ಟು, ಭ್ರಾಂತಿಭ್ರಮೆಯಂ ಬಿಟ್ಟು, ಜಂಗಮವಾಗಬೇಕು ಕಾಣಿರೆ ಮರುಳುಗಳಿರಾ. ಇಂತೀ ಕಡುಲೋಭದ ರುಚಿ ಹಿಂಗಿ ಜಂಗಮವಾದಲ್ಲದೆ, ಭವ ಹಿಂಗದು ಕಾಣಾ ಗುಹೇಶ್ವರಾ.