ವಚನ - 1159     
 
ಗುರುವಿನ ಪರಿ ವಿಪರೀತವಾಯಿತ್ತಯ್ಯಾ, ಭ್ರಮರ ಕೀಟ ನ್ಯಾಯದಂತಾಯಿತ್ತು. ಗುರು ತನ್ನ ನೆನೆವನ್ನಬರ ಎನ್ನನಾ ಗುರುವ ಮಾಡಿದನು. ಇನ್ನು ಶಿಷ್ಯನಾಗಿ ಶ್ರೀಗುರುವ ಪೂಜಿಸುವರಾರು ಹೇಳಾ ಗುಹೇಶ್ವರಾ?