ವಚನ - 1212     
 
ತನುಗುಣನಾಸ್ತಿ, ಮನಗುಣನಾಸ್ತಿ, ಧನಗುಣನಾಸ್ತಿಯಾದಡೇನು? ಭಾವನಾಸ್ತಿಯಾಗಿರಬೇಕು. ಭಾವನಾಸ್ತಿಯಾದಲ್ಲದೆ ಅರಿವು ನೆಲೆಗೊಳ್ಳದು. ಅರಿವು ನೆಲೆಗೊಂಡಲ್ಲಿ ಕುರುಹಿಂಗೆ ಹೊರಗು ಕುರುಹಳಿದು ಕೂಡುವ ಪರಮಸುಖವು, ಗುಹೇಶ್ವರಲಿಂಗದಲ್ಲಿ ನಿನಗೆ ಸಾಧ್ಯವಾದ ಪರಿಯ ಹೇಳಾ ಮಡಿವಾಳ ಮಾಚಯ್ಯಾ?