ವಚನ - 1249     
 
ತ್ರಿನದಿಯ ಮಧ್ಯದಲ್ಲೈದು ಕುದುರೆಯ ಕಟ್ಟಿದ್ದ ಕಂಬ ಮುರಿಯಿತ್ತು. ಎಂಟಾನೆ ಬಿಟ್ಟೋಡಿದವು. ಹದಿನಾರು ಪ್ರಜೆ ಬೊಬ್ಬಿಡುತ್ತಿದ್ದವು. ಶತಪತ್ರಕಮಲಕರ್ಣಿಕಾ ಮಧ್ಯದಲ್ಲಿ ಗುಹೇಶ್ವರಲಿಂಗವು ಮುಗ್ಧವಾಗಿರ್ದನು.